ಸಾಕ್ಷಾತ್ಕಾರ

ದೇವರು ಎಲ್ಲಿದ್ದಾನೆ? ಹುಡುಕದೆಯೇ ಹಿರಣ್ಯಕಶ್ಯಪುವಿಗೆ ಕಂಡನಂತೆ! ಅದೂ ಯಾವುದೋ ಭಕ್ತ ಬರೆದ ಕಥೆಯಲ್ಲವೇ? ಬರೆದವರೆಲ್ಲ ಕಥಾನಾಯಕನನ್ನು ದೇವರೆಂದೋ, ದೇವರೇ ನಾಯಕನೆಂದೋ ಬರೆದಿರುತ್ತಾರೆ ಬಿಡಿ. ನಾನು ಯಾರೋ ಬರೆದಿಟ್ಟ ಕಥೆಯ ನಾಯಕನ ಹುಡುಕಾಟದಲ್ಲಿಲ್ಲ, ಆ ಶಕ್ತಿಯನ್ನು ಹುಡುಕುತ್ತಿದ್ದೇನೆ.
ಆ ಮಹಾಶಕ್ತಿ ಇಂತಹ ಶುಭ್ರ ಹಿಮಾಲಯದಲ್ಲಿರದೇ ಮತ್ತೆಲ್ಲಿರುತ್ತಾನೆ? ಇಲ್ಲ, ಇಲ್ಲಿಯೂ ಆ ಚೇತನವಿಲ್ಲ! ಇದು ಬರೀ ಬೆಳಕಿನ ಜಾಗ, ಬರೀ ಚಳಿಯ ಜಾಗ ಇಲ್ಲಿ ಹಸಿರೂ ಚಿಗುರುವುದಿಲ್ಲ ಇನ್ನೆಂತಹ ಚೇತನವಿದ್ದೀತು!
ಪರಮಾರ್ಥ ಕಾಣಲು ಹೋದವ ಮರಳಿ ಬಂದ. ಬಂದವನಿಗೆ ಎಲ್ಲ ಕೇಳಿದರು,ಸಾಕ್ಷಾತ್ಕಾರವಾಯಿತಾ?
ಇವನೇನಂದ?
"ನಿಮ್ಮ ದೇವರು ಸಿಕ್ಕಿದ್ದ, ನನ್ನ ಕಂಡು ಕೈಮುಗಿದು ಹುಡುಕಿ ಕಾಟಕೊಡಬೇಡಿ ಏನೇ ಆದರೂ ನಾನಿರುವೆ...ಅಂದ"

Comments

Popular posts from this blog

ಒಂದು ಭಾನುವಾರದ ಕತೆ

ವಿದಾಯ...

ಜಮೀನು, ಕೊಡದಲ್ಲ